ADVERTISEMENT

‘ಪಾಂಡವರು, ಜೋಡೆತ್ತು ಗೆಲುವಿನ ರೂವಾರಿ’

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 21:53 IST
Last Updated 10 ನವೆಂಬರ್ 2020, 21:53 IST
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್   

ಮಂಗಳೂರು: ‘ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವಕ್ಕೆ ಜನತೆ ಆಶೀರ್ವದಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಶಿರಾದಲ್ಲಿ ಪಕ್ಷದ ಪಂಚ ಪಾಂಡವರು ಹಾಗೂ ಆರ್.ಆರ್. ನಗರದಲ್ಲಿ ಆರ್.ಅಶೋಕ ಹಾಗೂ ಅರವಿಂದ ಲಿಂಬಾವಳಿ ಅವರು ಜೋಡೆತ್ತು ರೀತಿಯಲ್ಲಿ ಕಾರ್ಯಕರ್ತರ ಜೊತೆ ದುಡಿದು ಗೆಲ್ಲಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT