ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದರು. ಇಬ್ಬರ ನಡುವೆ ಮನಸ್ತಾಪ ಇದೆ ಎಂಬ ವದಂತಿಗಳ ಹಿನ್ನೆಲೆ ಯಲ್ಲಿ ಈ ಭೇಟಿಗೆ ಮಹತ್ವ ದೊರೆತಿದೆ.
ಬಿಬಿಎಂಪಿ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರದಲ್ಲಿ ಉಭಯ ನಾಯಕರಲ್ಲಿ ಮನಸ್ತಾಪ ಏರ್ಪಟ್ಟಿದೆ ಎನ್ನಲಾಗಿತ್ತು. ಬಹಿರಂಗ ಹೇಳಿಕೆಗಳ ಮೂಲಕವೂ ಅದು ಸಾಬೀತಾಗಿತ್ತು.
ಮಾತುಕತೆ ಬಳಿಕ ನಳಿನ್ ಅವರು ಸುದ್ದಿಗಾರರೊಂದಿಗೆ ಮಾತನಾಡಲಿದ್ದು, ತಮ್ಮ ನಿಲುವನ್ನು ಸ್ಪಷ್ಟಪಡಿಸುವ ನಿರೀಕ್ಷೆ ಇದೆ.
ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮಾತನಾಡಿದ್ದ ನಳಿನ್, ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅವರ ಮಾರ್ಗದರ್ಶನದಲ್ಲೇ ಮುಂದಕ್ಕೆ ಸಾಗುತ್ತಿರುವುದಾಗಿ ಅವರು ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.