ಮೈಸೂರು: ನಂಜನಗೂಡಿನ ಔಷಧ ಕಾರ್ಖಾನೆಯ ಐವರು ನೌಕರರಲ್ಲಿ ಕೋವಿಡ್-19 ಇರುವುದು ಶನಿವಾರ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೋವಿಡ್-19ಪೀಡಿತರ ಸಂಖ್ಯೆ ಇದರಿಂದ ಒಟ್ಟು 47ಕ್ಕೆ ಏರಿಕೆಯಾಗಿದೆ. ಇಬ್ಬರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೂ ಮತ್ತೆ ಐದು ಮಂದಿಗೆ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಈ ಎಲ್ಲಾ ಸೋಂಕಿತರು ಫಾರ್ಮಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಸೋಂಕು ತಗುಲಿದವರು ಎಂದು ತಿಳಿಸಿದೆ.
47 ಕೊರೊನಾಪೀಡಿತರಲ್ಲಿ 36 ಜನರು ನಂಜನಗೂಡಿನ ಔಷಧ ಕಾರ್ಖಾನೆಯ ನೌಕರರು ಮತ್ತು ಅವರ ಸಂಬಂಧಿಕರು.
8 ಜನರು ತಬ್ಲೀಗ್ ಸಂಪರ್ಕ ಹೊಂದಿದವರು. ಇಬ್ಬರು ದುಬೈನಿಂದ ಬಂದವರಾಗಿದ್ದು, ಉಳಿದ ಒಬ್ಬರಿಗೆ ಇವರ ಜತೆ ನಂಟು ಹೊಂದಿದ್ದರಿಂದ ಕೋವಿಡ್-19 ತಗುಲಿದೆ. ಔಷಧ ಕಾರ್ಖಾನೆಯ ಮೊದಲ ಸೋಂಕಿತ ಹಾಗೂದುಬೈನಿಂದ ಬಂದವರೊಬ್ಬರು ಗುಣಮುಖರಾಗಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.