ಬೆಂಗಳೂರು: ಶ್ರೀ ನಾರಾಯಣ ಗುರು, ಗಾಣಿಗ ಮತ್ತು ಹಡಪದ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಈಡಿಗ ಸಮುದಾಯದ 26 ಉಪ ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಗಾಣಿಗ, ತೇಲಿ, ಗಾಂಡ್ಲ,ವನಿಯನ್ ಹಾಗೂ ಜ್ಯೋತಿನಗರ ವೈಶ್ಯ ಸಮುದಾಯ
ಗಳ ಅಭಿವೃದ್ಧಿಗೆ ಗಾಣಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಹಡಪದ ಸಮುದಾಯದ ಅಭಿವೃದ್ಧಿಗೆ ಹಡಪದ ನಿಗಮ ಸ್ಥಾಪಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
2022–23ನೇ ಆರ್ಥಿಕ ವರ್ಷದ ಬಜೆಟ್ನಲ್ಲಿ ನಾರಾಯಣ ಗುರು ಅಭಿವೃದ್ಧಿಕೋಶ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಈಡಿಗರಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನೇ ಸ್ಥಾಪಿಸುವಂತೆ ಸಮುದಾಯದ ಚುನಾಯಿತ ಪ್ರತಿನಿಧಿಗಳು, ಮಠಾ
ಧೀಶರು ಹಾಗೂ ಸಂಘ– ಸಂಸ್ಥೆಗಳ ಪ್ರಮುಖರು ಒತ್ತಾಯಿಸಿದ್ದರು. ಶುಕ್ರವಾರ ಮಂಡಿಸಿದ್ದ ಬಜೆಟ್ನಲ್ಲೂ ನಿಗಮಗಳ ಸ್ಥಾಪನೆ ಕುರಿತು ಘೋಷಿಸಿರಲಿಲ್ಲ. ವಿವಿಧ ಸಮುದಾಯಗಳ ಮುಖಂಡರು ನಿಗಮಗಳ ಸ್ಥಾಪನೆಗೆ ಒತ್ತಡ ಹೇರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.