ಬೆಂಗಳೂರು: ಪ್ರಧಾನಿ ಮೋದಿಯವರಿಗೆ ತಾಕತ್ತಿದ್ದರೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
'ಗಾಂಧಿ ಕುಟುಂಬಕ್ಕಾಗಿ ಚಪ್ಪಲಿ ಸವೆಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಜವಾಬ್ದಾರಿ ಲಭಿಸಿದೆ. ರಾಹುಲ್ ಗಾಂಧಿಯವರಿಗೆ ಪಾಠ ಹೇಳಿಕೊಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಗಾಂಧಿ ಕುಟುಂಬದ ಸೇವೆಯೇ ದೇಶ ಸೇವೆ' ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ವಿಡಿಯೊವೊಂದನ್ನು ಹಂಚಿಕೊಂಡಿತ್ತು.
ಇದಕ್ಕೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್, 'ಪಕ್ಷಕ್ಕಾಗಿ, ದೇಶಕ್ಕಾಗಿ ಬದುಕು ಸವೆಸಿದ ಖರ್ಗೆ ಅವರಂತಹ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು ಪಕ್ಷ ಸಂಘಟಿಸುವ ಸಂಸ್ಕೃತಿ ನಮ್ಮಲ್ಲಿದೆ. ನೀವು(ಬಿಜೆಪಿ) ಅಡ್ವಾಣಿ, ಮುರಳಿ ಮನೋಹರ ಜೋಶಿಯವರನ್ನು ಮೂಲೆಗೆ ಕೂರಿಸಿದಂತೆ ನಮ್ಮಲ್ಲಿಲ್ಲ. ಮೋದಿಗೆ ತಾಕತ್ತಿದ್ದರೆ ಒಂದೇ ಒಂದು ಪತ್ರಿಕಾಗೋಷ್ಠಿ ಹಾಗೂ ಟೆಲಿಪ್ರಾಂಪ್ಟರ್ ಇಲ್ಲದೆ ಭಾಷಣ ಮಾಡಲು ಹೇಳಿ' ಎಂದು ತಿರುಗೇಟು ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.