ಹುಬ್ಬಳ್ಳಿ: ‘ಲೋಕಸಭಾ ಚುನಾವಣಾ ರ್ಯಾಲಿ ಫೆ.10ರಂದು ಹುಬ್ಬಳ್ಳಿಯಲ್ಲಿ ಹಾಗೂ ಫೆ.17ರಂದು ಕಲಬುರ್ಗಿಯಲ್ಲಿ ನಡೆಯಲಿದೆ ಎಂದು ರ್ಯಾಲಿಯ ಉಸ್ತವಾರಿ, ಶಾಸಕ ಆರ್.ಅಶೋಕ್ ತಿಳಿಸಿದರು.
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಚುನಾವಣಾ ರ್ಯಾಲಿ ಹುಬ್ಬಳ್ಳಿಯಿಂದ ಆರಂಭವಾಗಲಿದೆ. ಅಂದು ಸಂಜೆ 4ಕ್ಕೆ ನಡೆಯುವ ಈ ರ್ಯಾಲಿಯಲ್ಲಿ ಧಾರವಾಡ, ಉತ್ತರ ಕನ್ನಡ ಮತ್ತು ಹಾವೇರಿ– ಗದಗ ಲೋಕಸಭಾ ಕ್ಷೇತ್ರಗಳ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಸೇರಿದಂತೆ ಸುಮಾರು 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸುಮಲತಾಗೆ ಸ್ವಾಗತ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅಣಿಯಾಗಿರುವ ನಟಿ ಸುಮಲತಾ ಅಂಬರೀಷ್ ಅವರು ಬಿಜೆಪಿಗೆ ಬರುವುದಾದರೆ ಸ್ವಾಗತಿಸುವುದಾಗಿ ಅಶೋಕ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.