ADVERTISEMENT

ಅಸಮರ್ಥ ಸಚಿವರನ್ನು ಕೈಬಿಡಬೇಕು: ಶಾಸಕ ನೆಹರು ಓಲೇಕಾರ 

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 14:45 IST
Last Updated 6 ಫೆಬ್ರುವರಿ 2020, 14:45 IST
   

ಹಾವೇರಿ: ‘ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಕೆಲಸ ಮಾಡದ ಅಸಮರ್ಥ ಸಚಿವರನ್ನು ಕೈಬಿಡಬೇಕು. ಆಗ ಕ್ಯಾಬಿನೆಟ್‌ಗೆ ಗೌರವ ಬರುತ್ತದೆ’ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ನೆಹರು ಓಲೇಕಾರ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಚಿವರು ಸಮಪರ್ಕವಾಗಿ ಕೆಲಸ ಮಾಡದೆ, ಶಾಸಕರನ್ನೂ ಕಡೆಗಣಿಸಿದ ಕಾರಣ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನಗೊಂಡಿತು. ಆ ಪರಿಸ್ಥಿತಿ ಬಿಜೆಪಿ ಸರ್ಕಾರಕ್ಕೆ ಬರಬಾರದು ಎಂದರೆ ಸಚಿವರಾದವರು ಸರಿಯಾಗಿ ಕಾರ್ಯನಿರ್ವಹಣೆ ಮಾಡಬೇಕು’ ಎಂದು ಹೇಳಿದರು.

‘ಸರ್ಕಾರ ಚೆನ್ನಾಗಿ ನಡೆಯಬೇಕು ಎಂಬುದು ನಮ್ಮ ಮೂಲ ಗುರಿ. ಅಧಿಕಾರ ಹಿಡಿಯಬೇಕು ಎಂಬುದಲ್ಲ. ಸಚಿವರು ಕೆಲಸ ಮಾಡದೇ ಇದ್ದರೆ, ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಸಚಿವರೆಲ್ಲರೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮಸ್ಯೆಗಳಿಗೆ ಸ್ಪಂದಿಸಬೇಕು. ಮುಂದಿನ ದಿನಗಳಲ್ಲಿ ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.