ADVERTISEMENT

ಮುಂದಿನ ವರ್ಷದಿಂದ ‘ಎನ್ಇಪಿ’ ಅಡಿ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವ ಬಿ.ಸಿ.ನಾಗೇಶ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 10:44 IST
Last Updated 12 ಮಾರ್ಚ್ 2022, 10:44 IST
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ    

ಕಾರವಾರ: 'ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಾ‌ದ್ಯಂತ 20 ಸಾವಿರ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಅರ್ಲಿ ಚೈಲ್ಡ್ ಎಜುಕೇಷನ್ ಸಿಸ್ಟಮ್- ನರ್ಸರಿಯಿಂದ ಎರಡನೇ ತರಗತಿ) ಶಿಕ್ಷಣ ನೀಡಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಜನ ಸಾಮಾನ್ಯರ ಮಕ್ಕಳಿಗೆ ಯಾವುದೇ ಹೊರೆಯಿಲ್ಲದ ಶಿಕ್ಷಣ ನೀಡಬೇಕು ಎಂಬುದು ಉದ್ದೇಶವಾಗಿದೆ' ಎಂದು ಹೇಳಿದರು.

'ರಾಜ್ಯದಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಲು ನಿವೃತ್ತ ಐ.ಎ.ಎಸ್ ಅಧಿಕಾರಿ ಮದನ್ ಗೋಪಾಲ್ ನೇತೃತ್ವದಲ್ಲಿ 26 ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಮೂಲಕ ವಿವಿಧ ಕ್ಷೇತ್ರಗಳ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಪ್ರತಿ.ಜಿಲ್ಲೆಗೆ ಬೇಕಾದ ಕೌಶಲವನ್ನು ಒಳಗೊಂಡ ಪಠ್ಯಕ್ರಮ ಜಾರಿಗೆ ಸಿದ್ಧತೆ ನಡೆದಿದೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.