ADVERTISEMENT

ಸ್ಮಶಾನದಲ್ಲಿ ಹೊಸ ಕಾರ್‌ ಚಾಲನೆ!

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 10:35 IST
Last Updated 12 ಜುಲೈ 2020, 10:35 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ಮೌಢ್ಯಗಳ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಯಮಕನಮರಡಿ ಕ್ಷೇತ್ರದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ತಮ್ಮ ಹೊಸ ಕಾರನ್ನು ಇಲ್ಲಿನ ಸದಾಶಿವನಗರ ಸ್ಮಶಾನದಲ್ಲಿ ಅಧಿಕೃತವಾಗಿ ಉದ್ಘಾಟನೆ (ಚಾಲನೆ) ಮಾಡಲಿದ್ದಾರೆ.

‘ಹೊಸ ವಾಹನಗಳಿಗೆ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಈ ಸಂಪ್ರದಾಯ ಮುರಿಯಲು ಅವರು ಮುಂದಾಗಿದ್ದಾರೆ’ ಎನ್ನಲಾಗುತ್ತಿದೆ. ಜುಲೈ 13ರಂದು ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹಾಗೂ ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಡಿಜಿಟಲ್ ವೇದಿಕೆಯಲ್ಲಿ ನೇರಪ್ರಸಾರ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT