ಬೆಂಗಳೂರು: ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು (ಮಂಗಳವಾರ) ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ನಗರದ ಕ್ಯಾಪಿಟಲ್ ಹೊಟೇಲ್ನಲ್ಲಿ ಈ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸುಸೂತ್ರ ಆಯ್ಕೆ ಪ್ರಕ್ರಿಯೆಗಾಗಿ ದೆಹಲಿಯಿಂದ ವೀಕ್ಷಕರಾಗಿ ಬರುವ ಕೇಂದ್ರ ಸಚಿವರಾದ ಕಿಶನ್ ರೆಡ್ಡಿ ಮತ್ತು ಧರ್ಮೇಂದ್ರ ಪ್ರಧಾನ್ ಅವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೊದಲಿಗೆ ಹೊಸ ಮುಖ್ಯಮಂತ್ರಿ ಆಯ್ಕೆಗೆ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ಹೆಸರು ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ. ರಾತ್ರಿ 7.30 ಕ್ಕೆ ಈ ಸಭೆ ನಡೆಯಲಿದೆ.
ಆಯ್ಕೆ ಪ್ರಕ್ರಿಯೆ ಬೇಗನೆ ಮುಗಿಸಿ ಗುರುವಾರದ ವೇಳೆಗೆ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇವನ್ನೂ ಓದಿ
*PV Web Exclusive: ಹೊಸ ಸಂಪುಟದಲ್ಲಿ ‘ಕಲ್ಯಾಣ’ ಯಾರಿಗೆ?
*ನಾಲ್ಕು ಬಾರಿಯೂ ಬಿಕ್ಕಟ್ಟಿನಲ್ಲೇ ನಿರ್ಗಮನ!
*ಹೆಜ್ಜೆ ಹೆಜ್ಜೆಗೂ ಅಗ್ನಿಪರೀಕ್ಷೆ: ಕಣ್ಣೀರಿಟ್ಟ ಬಿಎಸ್ವೈ
*ಗುಂಡ್ಲುಪೇಟೆ: ಯಡಿಯೂರಪ್ಪ ಅಭಿಮಾನಿ ಆತ್ಮಹತ್ಯೆ
*ಸಚಿವ ಸ್ಥಾನ ಬೇಡ ಎನ್ನಲು ನಾನು ಸನ್ಯಾಸಿಯಲ್ಲ: ಶಿವರಾಮ ಹೆಬ್ಬಾರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.