ಬೆಂಗಳೂರು: ಕೋವಿಡ್ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕಾಗಿ ತಾವರೆಕೆರೆ ಗ್ರಾಮದ ಬಳಿ ನಿರ್ಮಿಸುತ್ತಿರುವ ಸ್ಮಶಾನದ ಸಿದ್ಧತಾ ಕಾರ್ಯವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್.ಅಶೋಕ ಗುರುವಾರ ರಾತ್ರಿ ಪರಿಶೀಲಿಸಿದರು.
ಸುಮಾರು 50 ಎಕರೆ ಪ್ರದೇಶದಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು, ಏಕ ಕಾಲಕ್ಕೆ 20 ಶವಗಳ ದಹನ ಮಾಡಬಹುದಾಗಿದೆ. ಇಲ್ಲಿ ಬೋರ್ವೆಲ್ ಸೇರಿದಂತೆ ಅಗತ್ಯ ವ್ಯವಸ್ಥೆಯನ್ನು
ಮಾಡಲಾಗಿದೆ. ನಗರದ ವಿದ್ಯುತ್ ಚಿತಾಗಾರಗಳ ಮೇಲೆ ಒತ್ತಡ ಹೆಚ್ಚಾಗಿರುವುದರಿಂದ ಈ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಶವಗಳ ದಹನ ಕಾರ್ಯ ನಡೆಯಲಿದೆ. ಇದಕ್ಕಾಗಿ ಸುಮಾರು 100 ಟನ್ಗೂ ಅಧಿಕ ಸೌಧೆಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.