ADVERTISEMENT

ಅಕ್ರಮ ಗಣಿ ಸಕ್ರಮಕ್ಕೆ ಹೊಸ ನಿಯಮ: ನಿರಾಣಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 19:13 IST
Last Updated 26 ಜನವರಿ 2021, 19:13 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಯಾದಗಿರಿ: ‘ಅಕ್ರಮ ಗಣಿಗಳನ್ನು ಸಕ್ರಮಗೊಳಿಸಲು ಹೊಸ ನಿಯಮ ಜಾರಿಗೆ ಸರ್ಕಾರಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಚರ್ಚಿಸಿ ಮಾರ್ಗಸೂಚಿ ಸಿದ್ಧಪಡಿಸಲು ಜ. 27 ಮತ್ತು 28ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ' ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

‘ಎಲ್ಲ ಅಕ್ರಮ ಗಣಿಗಳನ್ನುಸಕ್ರಮ ಮಾಡುವುದಿಲ್ಲ. ಹೊಸ ಮಾರ್ಗಸೂಚಿಗೆ ಅನುಗುಣವಾಗಿದ್ದರೆ ಮಾತ್ರ ಅಕ್ರಮ ಗಣಿಗಳನ್ನು ಸಕ್ರಮ ಮಾಡುತ್ತೇವೆ. ಇದೆಲ್ಲವೂಕಾನೂನಿನ ಚೌಕಟ್ಟಿನಲ್ಲಿ ನಡೆಯಲಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಅಕ್ರಮ ಗಣಿಗಾರಿಕೆ ತಡೆಗೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕಾಯ್ದೆ ಜಾರಿ ಮಾಡಿದ್ದಾರೆ ಎಂಬುದನ್ನು ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿಯೂ ಹೊಸ ಗಣಿ ಕಾಯ್ದೆ ಜಾರಿಗೊಳಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

ADVERTISEMENT

‘ದೇಶದಾದ್ಯಂತ ಹಲವಾರು ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.