ADVERTISEMENT

ಕೋವಿಡ್‌ನಿಂದ ಮದುಮಗ ಸಾವು

ಜೂನ್ 25ರಂದು ಮದುವೆಯಾಗಿದ್ದ ಯುವಕ ಜೂನ್ 30ರಂದು ಕೊನೆಯುಸಿರು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 12:52 IST
Last Updated 1 ಜುಲೈ 2020, 12:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾರವಾರ: ಭಟ್ಕಳದಲ್ಲಿ ಜೂನ್ 25ರಂದು ಮದುವೆಯಾಗಿದ್ದ 25 ವರ್ಷದಯುವಕ,ಜೂನ್ 30ರಂದು ಕೋವಿಡ್ 19ನಿಂದ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಅವರ ಮದುವೆಯಲ್ಲಿ ಭಾಗವಹಿಸಿದ್ದ ಸುಮಾರು 70 ಜನರ ಗಂಟಲುದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂಲತಃ ಭಟ್ಕಳದವರಾದಆ ಯುವಕ, ಬೆಂಗಳೂರಿನಲ್ಲಿ ಹುಟ್ಟಿ ಬೆಳೆದವರು. ಅವರ ಕುಟುಂಬ ಮಂಗಳೂರಿನಲ್ಲಿ ನೆಲೆಸಿದೆ. ಮೂಲ ಮನೆಯಲ್ಲಿ ಮದುವೆಯಾದ ಅವರು ಜೂನ್ 26ರಂದು ಮಂಗಳೂರಿಗೆ ತೆರಳಿದ್ದರು. ಅಲ್ಲಿ ಅವರನ್ನು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಗಂಟಲು ದ್ರವದ ಮಾದರಿಯ ಪರೀಕ್ಷಾ ವರದಿ ಬರುವ ಮೊದಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು.

ಯಲ್ಲಾಪುರಕ್ಕೆ ಮಹಾರಾಷ್ಟ್ರದಿಂದ ಬಂದು ತಾಲ್ಲೂಕು ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿದ್ದ 69 ವರ್ಷದ ಮಹಿಳೆ, ಹೃದಯ ಸ್ತಂಭನದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಅವರಿಗೂ ಕೋವಿಡ್ 19 ಪಾಸಿಟಿವ್ ಬಂದಿದೆ. ಆದರೆ, ಅವರು ಸೋಂಕಿನಿಂದಾಗಿಯೇ ಮೃತಪಟ್ಟಿದ್ದಲ್ಲ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.