ADVERTISEMENT

ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ ಕಷ್ಟ: ಡಾ.ಯತೀಂದ್ರ

ಸ್ಪರ್ಧೆ: ಬಾದಾಮಿಯಲ್ಲಿ ಮುಖಂಡರೊಂದಿಗೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 4:27 IST
Last Updated 2 ಜುಲೈ 2022, 4:27 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬಾದಾಮಿ: ‘ತಂದೆಯವರಿಗೆ ಬಾದಾಮಿ ಕ್ಷೇತ್ರ ದೂರವಾಗುತ್ತದೆ. ಸಾರ್ವಜನಿಕರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಬಾದಾಮಿ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವುದು ಕಷ್ಟ’ ಎಂದು ವರುಣಾ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದರು.

'ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಈ ಕ್ಷೇತ್ರದಲ್ಲಿ ಜನರು ಆಯ್ಕೆ ಮಾಡಿ ಕಳಿಸಿದ್ದೀರಿ. ನಿಮ್ಮ ಋಣ ನಮ್ಮ ಕುಟುಂಬದ ಮೇಲಿದೆ. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದಾರೆ' ಎಂದು ಡಾ. ಯತೀಂದ್ರ ತಿಳಿಸಿದರು.

ಮುಖಂಡರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿ ಅವರು ಮಾತನಾಡಿದರು. ‘ಮುಂದಿನ ವಿಧಾನಸಭೆ ಚುನಾವಣೆಯಲ್ಲಿಯೂ ಇಲ್ಲಿಂದಲೇ ಸ್ಪರ್ಧಿಸಲಿ’ ಎಂದು ಮುಖಂಡ ಎಂ.ಬಿ. ಹಂಗರಗಿ, ಹೊಳೆಬಸು ಶೆಟ್ಟರ್‌ ಒತ್ತಾಯಿಸಿದರು.

ADVERTISEMENT

‘ಕಷ್ಟವಾದರೂ ಬಾದಾಮಿ ಯಲ್ಲಿಯೇ ಸ್ಪರ್ಧಿಸಲು ಹೇಳುವೆ’ ಎಂದು ಯತೀಂದ್ರ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.