ADVERTISEMENT

ಹಾಸನದಿಂದ ದೇವೇಗೌಡರೇ ಸ್ಪರ್ಧಿಸಲಿ: ಪ್ರಜ್ವಲ್ ರೇವಣ್ಣ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2019, 20:21 IST
Last Updated 23 ಫೆಬ್ರುವರಿ 2019, 20:21 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ಹಾಸನ: ‘ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ಎಚ್‌.ಡಿ.ದೇವೇಗೌಡರೇ ಸ್ಪರ್ಧಿಸಬೇಕು ಎಂಬುದು ನಮ್ಮ ಆಸೆಯಾಗಿದ್ದು, ಸ್ಪರ್ಧಿಸುವುದು ಅವರ ಹಕ್ಕು’ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಇಲ್ಲಿ ಶನಿವಾರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ‘ಚುನಾವಣೆಗೆ ಸ್ಪರ್ಧಿಸಲು ಸಾಹೇಬರು ನನಗೆ ಹೇಳಿದ್ದು ನಿಜ. ಆದರೆ, ಮತ್ತೆ ಅವರೇ ಅಭ್ಯರ್ಥಿ ಆಗಬೇಕು ಎಂಬ ನಮ್ಮ ಅನಿಸಿಕೆ ತಿಳಿಸಿದ್ದೇವೆ’ ಎಂದರು.

‘ಕಾಂಗ್ರೆಸ್ ಮೈತ್ರಿ ಧರ್ಮ ಪಾಲಿಸಬೇಕು. ಹಾಸನದಲ್ಲಿ ನಾನು ಸ್ಪರ್ಧಿಸಿದರೆ ಬೆಂಬಲಿಸುವುದಿಲ್ಲ ಎಂದು ಮುಖಂಡ ಎ.ಮಂಜು ಹೇಳಿದ್ದಾರೆ. ಬೆಂಬಲಿಸಲು ಇಷ್ಟವಿಲ್ಲದಿದ್ದರೆ ಕಾಂಗ್ರೆಸ್ ಸಹ ಅಭ್ಯರ್ಥಿ ಹಾಕಲಿ’ ಎಂದು ತಿರುಗೇಟು ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.