ADVERTISEMENT

News Express | ಮೈಸೂರಿನಲ್ಲಿ ಅದ್ಧೂರಿ ಜಂಬೂ ಸವಾರಿ

ಪ್ರಜಾವಾಣಿ ವಿಶೇಷ
Published 24 ಅಕ್ಟೋಬರ್ 2023, 14:41 IST
Last Updated 24 ಅಕ್ಟೋಬರ್ 2023, 14:41 IST

ವಿಜಯದಶಮಿ ದಿನವಾದ ಮಂಗಳವಾರ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಜಂಬೂಸವಾರಿ ನಡೆದಿದ್ದು, ಲಕ್ಷಾಂತರ ಮಂದಿ ಗಜಪಡೆಯ ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಮಧ್ಯಾಹ್ನ 1.45ಕ್ಕೆ ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಜಂಬೂ ಸವಾರಿ ಮೆರವಣಿಗೆಯು ಆರಂಭಗೊಂಡಿತು. 49 ಸ್ತಬ್ಧಚಿತ್ರಗಳು, 50ಕ್ಕೂ ಹೆಚ್ಚು ಕಲಾತಂಡಗಳು ತಮ್ಮ ಪ್ರದರ್ಶನದ ಮೂಲಕ ರಾಜ್ಯದ ಸಾಂಸ್ಕೃತಿಕ ಹಿರಿಮೆಯನ್ನು ಬಿಂಬಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.