ADVERTISEMENT

ಕತ್ತಿ ಸೇರಿ ಮೂವರು ಸಂಪುಟಕ್ಕೆ: ಬಿ.ಎಸ್‌. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 20:00 IST
Last Updated 25 ಫೆಬ್ರುವರಿ 2020, 20:00 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ    

ನವದೆಹಲಿ: ಬಜೆಟ್‌ ಅಧಿವೇಶನದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಹುಕ್ಕೇರಿ ಶಾಸಕ ಉಮೇಶ ಕತ್ತಿ ಸೇರಿದಂತೆ ಮೂವರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದಿಂದ ಬಂದಿರುವ 10 ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಈಗ ಬಿಜೆಪಿಯಲ್ಲಿರುವ ಆಕಾಂಕ್ಷಿಗಳಿಗೆ ಅವಕಾಶ ದೊರೆಯಲಿದೆ ಎಂದರು.

ಅಕ್ಕಿ ಕಡಿತಗೊಳಿಸಿ ಗೋಧಿ:ರಾಜ್ಯ ಬಜೆಟ್‌ ಮಂಡನೆಗೆ ಎಲ್ಲ ಸಿದ್ಧತೆಗಳೂ ನಡೆದಿವೆ. ‘ಅನ್ನಭಾಗ್ಯ’ ಯೋಜನೆ ಅಡಿ ನೀಡಲಾಗುವ ಅಕ್ಕಿಯಲ್ಲಿ ಎರಡು ಕೆ.ಜಿ. ಕಡಿತಗೊಳಿಸಿ ಗೋಧಿ ವಿತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.