ADVERTISEMENT

‘ನಿಖಿಲ್, ಪ್ರಜ್ವಲ್ ಸಾಕಷ್ಟು ಪ್ರಜ್ವಲಿಸಿದ್ದಾರೆ; ತೆರೆಮರೆಯಲ್ಲಿರಲಿ’-ದತ್ತ ಸಲಹೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 20:18 IST
Last Updated 18 ಜೂನ್ 2019, 20:18 IST
   

ಬೆಂಗಳೂರು: ಜೆಡಿಎಸ್ ಯುವ ಮೋರ್ಚಾ ಅಧ್ಯಕ್ಷ ಸ್ಥಾನವನ್ನು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಕುಟುಂಬದ ಹೊರಗಿನವರಿಗೆ ನೀಡಬೇಕು ಎಂದು ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಮಂಗಳವಾರ ಸಲಹೆ ಮಾಡಿದ್ದಾರೆ.

‘ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಈಗಾಗಲೇ ಸಾಕಷ್ಟು ಪ್ರಜ್ವಲಿಸಿದ್ದಾರೆ. ತೆರೆಮರೆಯಲ್ಲಿ ಇದ್ದುಕೊಂಡು ಪಕ್ಷ ಮುನ್ನಡೆಸಬೇಕು’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜೆಡಿಎಸ್ ಯುವ ಮೋರ್ಚಾ ಅಧ್ಯಕ್ಷ ಸ್ಥಾನವನ್ನು ನಿಖಿಲ್ ಅಥವಾ ಪ್ರಜ್ವಲ್‌ಗೆ ನೀಡುವ ಸಾಧ್ಯತೆಗಳಿವೆ ಎಂಬ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.