ADVERTISEMENT

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಭೇಟಿ ಮಾಡಿ ಶುಭಕೋರಿದ ನಿಖಿಲ್

​ಪ್ರಜಾವಾಣಿ ವಾರ್ತೆ
Published 11 ಜೂನ್ 2019, 10:48 IST
Last Updated 11 ಜೂನ್ 2019, 10:48 IST
ಫೇಸ್‌ಬುಕ್ ಚಿತ್ರ
ಫೇಸ್‌ಬುಕ್ ಚಿತ್ರ   

ಬೆಂಗಳೂರು: ಮಂಡ್ಯಲೋಕಸಭೆ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದ ನಿಖಿಲ್‌ ಕುಮಾರಸ್ವಾಮಿ, ಆಂಧ್ರ ಪ್ರದೇಶ ಮುಖ್ಯಮಂತ್ರಿವೈ.ಎಸ್. ಜಗನ್ ಮೋಹನ್ ರೆಡ್ದಿ ಅವರನ್ನುವಿಜಯವಾಡದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಜಗನ್‌ ಭೇಟಿ ಕುರಿತು ನಿಖಿಲ್‌ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.

‘ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ದಿ ಅವರನ್ನು ವಿಜಯವಾಡಾದಲ್ಲಿ ಭೇಟಿಯಾಗಿ, ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯ ಕೋರಿದೆ.

ADVERTISEMENT

ಅಂಧ್ರದಲ್ಲಿ ’ಜಗನ್ ಅಣ್ಣಾ’ ಎಂದೇ ಜನಪ್ರಿಯರಾಗಿರುವ ಜಗನ್ ಮೋಹನ್ ರೆಡ್ಡಿಯವರ ರಾಜಕೀಯ ಜೀವನ, ರಾಜಕೀಯ ಕ್ಷೇತ್ರದಲ್ಲಿರುವ ಎಲ್ಲ ಯುವಕರಿಗೆ, ಕಾರ್ಯಕರ್ತರಿಗೆ ಪ್ರೇರಣೆ ನೀಡುವಂಥದ್ದು. ಹತ್ತು ವರ್ಷಗಳಿಗೂ ಹೆಚ್ಚು ಸುಧೀರ್ಘ ಕಾಲದ ಅವರ ಹೋರಾಟದ ದಾರಿ ಎಲ್ಲ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ. ಜನರ ಸೇವೆಗಾಗಿ ಅವರ ಬದ್ದತೆ ಮತ್ತು ಎದುರಾದ ಎಲ್ಲ ಅಡೆತಡೆ, ಸೋಲು, ಸವಾಲುಗಳನ್ನು ಮೀರಿ, ಗುರಿಮುಟ್ಟುವವರೆಗೂ ವಿರಮಿಸದ ಅವರ ಛಲ, ದಿಟ್ಟತನ, ಹೋರಾಟಗಳಿಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಅವಕಾಶವನ್ನು ಅವರು ಸಂಪೂರ್ಣವಾಗಿ ಬಳಸಿಕೊಂಡು, ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿ ಅವರು, ಜನರ ನಿರೀಕ್ಷೆಗೆ ತಕ್ಕಂತೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.

ಕರ್ನಾಟಕದ ರಾಜಕಾರಣವನ್ನು ಕೂಡ ಚೆನ್ನಾಗಿ ತಿಳಿದಿರುವ ಜಗನ್ ರವರು ಪ್ರಸಕ್ತ ರಾಜಕೀಯ ಸನ್ನಿವೇಶಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದರು. ಇಂತಹ ಸಂದರ್ಭದಲ್ಲಿ ನನ್ನಂತಹ ಯುವ ರಾಜಕಾರಣಿಗಳಿಗೆ ಉತ್ತಮ ಅವಕಾಶಗಳಿವೆ, ಸಾರ್ವಜನಿಕ ಜೀವನದಲ್ಲಿ, ಯಾವುದಕ್ಕೂ ಹಿಂಜರಿಯದೆ ಜನಸೇವೆಯೊಂದನ್ನೇ ಗುರಿಯಾಗಿಟ್ಟುಕೊಂಡು ಮುಂದುವರಿಯುವಂತೆ ನನಗೆ ಸಲಹೆ ನೀಡಿ, ರಾಜಕೀಯದಲ್ಲಿ ಉತ್ತಮ ಭವಿಷ್ಯವನ್ನು ಹಾಗು ಯಶಸ್ಸನ್ನು ಹಾರೈಸಿದರು.’

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.