ADVERTISEMENT

ನೀತಿ ಆಯೋಗಕ್ಕೆ ಬಿ.ಜೆ. ಪುಟ್ಟಸ್ವಾಮಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 17:30 IST
Last Updated 30 ಏಪ್ರಿಲ್ 2022, 17:30 IST

ಬೆಂಗಳೂರು: ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಜೆ. ಪುಟ್ಟಸ್ವಾಮಿ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ‘ನನ್ನ 50 ವರ್ಷದ ರಾಜಕೀಯ, ಲೌಕಿಕ ಜೀವನದಿಂದ ಆಧ್ಯಾತ್ಮಿಕ ಜೀವನಕ್ಕೆ ದೈವ ಪ್ರೇರಣೆಯಿಂದ ಹೋಗುತ್ತಿದ್ದೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಮುಖಂಡರಾಗಿರುವ ಬಿ.ಜೆ. ಪುಟ್ಟಸ್ವಾಮಿ ಅವರು ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಆಯ್ಕೆಯಾಗಿದ್ದು, ಮೇ 15ರಂದು ಪಟ್ಟಾಭಿಷೇಕ ನೆರವೇರಲಿದೆ. ಮೇ 6ರಂದು ದೀಕ್ಷೆ ಪಡೆಯಲಿರುವ ಅವರು ಮಾದನಾಯಕನಹಳ್ಳಿಯಲ್ಲಿರುವ ಮಠವನ್ನು ಸ್ವರ್ಣಾನಂದ ಪುರಿ ಸ್ವಾಮೀಜಿ ಎಂಬ ಹೆಸರಿನೊಂದಿಗೆ ಮುನ್ನಡೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.