ADVERTISEMENT

ಜೆಡಿಎಸ್‌ ಸಖ್ಯದಿಂದಲೇ ಲೋಕಸಭೆ ಸೋಲು: ಮುಂದೆ ಯಾವ ಮೈತ್ರಿಯೂ ಇಲ್ಲ ಎಂದ ದಿನೇಶ್‌

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 7:11 IST
Last Updated 2 ಜುಲೈ 2020, 7:11 IST
   

ಬೆಂಗಳೂರು: ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿಕೊಂಡಿದ್ದರಿಂದಲೇ ಲೋಕಸಭಾ ಚುನಾವಣೆ ಯಲ್ಲಿ ಪಕ್ಷಕ್ಕೆ ಸೋಲು ಉಂಟಾಯಿತು. ಇನ್ನು ಮುಂದೆ ಅಂತಹ ಯಾವ ಮೈತ್ರಿಯೂ ಇಲ್ಲದೆ ಪಕ್ಷವು ಒಗ್ಗಟ್ಟಿನಿಂದ ಮುನ್ನಡೆಯಲಿದೆ ಎಂದು ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಮಾತನಾಡಿದ ದಿನೇಶ್‌ ಗುಂಡೂರಾವ್‌,ಪಕ್ಷವು ಇಂದು ಒಗ್ಗಟ್ಟಿನಿಂದಿದೆ. ಎಲ್ಲ ನಾಯಕರೂ ಇಲ್ಲಿ ಒಂದುಗೂಡಿದ್ದೇವೆ. ಪಕ್ಷವನ್ನು ಒಗ್ಗಟ್ಟಿನಿಂದ ಮುಂದೆ ಸಾಗಿಸುವ ಸಾಮರ್ಥ್ಯವನ್ನು ಡಿ.ಕೆ.ಶಿವಕುಮಾರ್ ಹೊಂದಿರುವ ಕಾರಣ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳು ನಿಶ್ಚಿತ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT