ADVERTISEMENT

ಬಸ್‌ ಪ್ರಯಾಣ ದರ ಏರಿಕೆಗೆ ಒಪ್ಪದ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 20:15 IST
Last Updated 24 ಜೂನ್ 2019, 20:15 IST
   

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ತಿರಸ್ಕರಿಸಿದರು.

ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪ್ರಯಾಣ ದರ ಏರಿಕೆಗೆ ಅಧಿಕಾರಿಗಳು ನೀಡಿದ ಸಮರ್ಥನೆಯನ್ನು ಮುಖ್ಯಮಂತ್ರಿ ಒಪ್ಪಲಿಲ್ಲ. ‘ಬಸ್ ದರ ಏರಿಕೆ ಅನಿವಾರ್ಯ ಕುರಿತು ಸೂಕ್ತ ಸಮರ್ಥನೆಯೊಂದಿಗೆ ಮರು ಪ್ರಸ್ತಾವನೆ ಸಲ್ಲಿಸಿ’ ಎಂದು ಸೂಚಿಸಿದರು.

ಸಾರಿಗೆ ಇಲಾಖೆ ಮತ್ತು ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಕ್ರಮಗಳು ಮತ್ತು ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಪರಿಚಯಿಸುವ ಕುರಿತು ವಿವರವಾದ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಕುಮಾರಸ್ವಾಮಿ ನಿರ್ದೇಶನ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.