ADVERTISEMENT

ಸಿಎಂ ಬದಲಾವಣೆ- ನಿಲುವಿನಲ್ಲಿ ಬದಲಾವಣೆ ಇಲ್ಲ: ಶಾಮನೂರು ಪ್ರತಿಪಾದನೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 17:01 IST
Last Updated 21 ಜುಲೈ 2021, 17:01 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ಬೆಂಗಳೂರು: ‘ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಿಸಬಾರದು ಎಂಬ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಲಿಂಗಾಯತರನ್ನು ಸೆಳೆಯಲು ಶಾಮನೂರು ಶಿವಶಂಕರಪ್ಪ ಪ್ರಯತ್ನಿಸುತ್ತಿದ್ದಾರೆ ಎಂಬ ಬಿಜೆಪಿಯ ಕೆಲವು ಮುಖಂಡರ ಆರೋಪಕ್ಕೆ ಬುಧವಾರ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಕಟ್ಟಿ, ಬೆಳೆಸಿದವರು, ಈಗ ಬದಲಾವಣೆ ಮಾಡಿದರೆ ಕಷ್ಟ. ಅವರ ದುರಾದೃಷ್ಟವನ್ನು ಅವರೇ ಅನುಭವಿಸುತ್ತಾರೆ. ನಮಗೆ ಲಿಂಗಾಯತ ಸಮುದಾಯವನ್ನು ಸೆಳೆಯುವ ಉದ್ದೇಶವಿಲ್ಲ’ ಎಂದರು.

‘ನನ್ನ ಬಳಿ ಎರಡು ಹೆಲಿಕಾಪ್ಟರ್‌ ಇದ್ದಾವೆ, ಬೆಂಜ್‌ ಕಾರು ಇವೆ. ನನಗೆ ಇನ್ನೇನು ಬೇಕು? ಸಾಕಲ್ಲವೆ’ ಎಂದು ಅವರು ಮರುಪ್ರಶ್ನೆ ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.