ADVERTISEMENT

'ಸ್ವಚ್ಛ ನಗರಿ' ರಾಜ್ಯಕ್ಕಿಲ್ಲ ಗರಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2019, 19:45 IST
Last Updated 31 ಡಿಸೆಂಬರ್ 2019, 19:45 IST
   

ನವದೆಹಲಿ: ‘ಸ್ವಚ್ಛ ನಗರ’ ಮೂರನೇ ತ್ರೈಮಾಸಿಕ ಪಟ್ಟಿಯನ್ನು ಕೇಂದ್ರ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದ್ದು, ಕರ್ನಾಟಕದ ಯಾವ ನಗರವೂ ಇದರಲ್ಲಿ ಸ್ಥಾನ ಪಡೆದಿಲ್ಲ.

ಮೊದಲ ಮತ್ತು ಎರಡನೇ ತ್ರೈಮಾಸಿಕದಲ್ಲಿ ರಾಜ್ಯದ ಮೈಸೂರು ಮತ್ತು ತುಮಕೂರು ಕ್ರಮವಾಗಿ ಮೊದಲೆರಡು ಸ್ಥಾನಗಳಲ್ಲಿದ್ದವು. ದೇಶದ 4,203 ನಗರಗಳನ್ನು ಪರಿಗಣಿಸಲಾಗಿತ್ತು.

ಮೂರನೇ ತ್ರೈಮಾಸಿಕದಲ್ಲಿ ಭೋಪಾಲ್ ನಗರವು ದೇಶದ ಸ್ವಚ್ಛ ನಗರ ಎನಿಸಿಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.