ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಇಲ್ಲ. ವೈಜ್ಞಾನಿಕ ಮಾನದಂಡಗಳ ಆಧಾರದಲ್ಲಿ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಜನ ಸಾಂದ್ರತೆ, ಆದ್ಯತಾ ಗುಂಪಿನಲ್ಲಿರುವ ಜನರ ಸಂಖ್ಯೆ ಆಧರಿಸಿ ವಿವಿಧ ಜಿಲ್ಲೆಗಳು, ತಾಲ್ಲೂಕುಗಳಿಗೆ ಕೋವಿಡ್ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರೇ ಲಸಿಕೆ ಹಂಚಿಕೆಯ ಮೇಲೆ ನಿಗಾ ಇರಿಸಿದ್ದಾರೆ’ ಎಂದರು.
ರಾಜ್ಯಕ್ಕೆ ಹಂಚಿಕೆಯಾಗಬೇಕಿದ್ದ ಪ್ರಮಾಣಕ್ಕಿಂತಲೂ ಹೆಚ್ಚು ಲಸಿಕೆ ಬಂದಿದೆ. ಗುರುವಾರ ರಾಜ್ಯಕ್ಕೆ 7.5 ಲಕ್ಷ ಡೋಸ್ ಲಸಿಕೆ ಪೂರೈಕೆಯಾಗಿದೆ. ರಾಜ್ಯದಲ್ಲಿ ಹೆಚ್ಚು ಪ್ರಮಾಣದ ಲಸಿಕೆ ನೀಡುತ್ತಿರುವುದರಿಂದ ಇನ್ನೂ ಹೆಚ್ಚಿನ ಲಸಿಕೆ ಅಗತ್ಯವಿದೆ. ಹೆಚ್ಚು ಲಸಿಕೆ ಹಂಚಿಕೆ ಮಾಡುವಂತೆ ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಮಂಡಿಸಲು ಶೀಘ್ರದಲ್ಲಿ ದೆಹಲಿಗೆ ತೆರಳಲಾಗವುಉದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.