ಶಿವಮೊಗ್ಗ: ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಇಲ್ಲಿ ಹೇಳಿದರು.
ದೆಹಲಿಯಲ್ಲಿ ಚರ್ಚಿಸುವೆ: ‘ಮಹದಾಯಿ ನದಿ ನೀರು ಹಂಚಿಕೆ, ಗಡಿ ವ್ಯಾಜ್ಯ ಸೇರಿದಂತೆ ಅಂತರರಾಜ್ಯ ವಿವಾದಗಳ ಬಗ್ಗೆ ಸಂಬಂಧಿಸಿದ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಮಹಾರಾಷ್ಟ್ರ ಸರ್ಕಾರದೊಂದಿಗೆ ನೀರು ವಿನಿಮಯ ಕುರಿತು ಸಮಾಲೋಚನೆ ನಡೆಸುತ್ತೇನೆ’ ಎಂದು ಬೆಳಗಾವಿಯಲ್ಲಿ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.