ಶಿವಮೊಗ್ಗ: ‘ನನ್ನ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಧ್ಯೆ ಯಾವುದೇ ಅಸಮಾಧಾನವಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.
ಪಕ್ಷದ ವರಿಷ್ಠರಿಗೆ ಬರೆದಿರುವ ಪತ್ರದ ಕುರಿತು ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ನನ್ನ ಇಲಾಖೆಗೆ ಸಂಬಂಧಪಟ್ಟ ವಿಚಾರಗಳನ್ನು ಹೇಳಿಕೊಂಡಿದ್ದೇನೆ. ಇದರಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ. ಇಲಾಖೆಯ ವಿಚಾರಗಳನ್ನು ಚರ್ಚಿಸಲು ರಾಜ್ಯಪಾಲರ ಬಳಿಯಷ್ಟೇ ಅಲ್ಲ; ದೆಹಲಿಗೂ ಹೋಗುತ್ತೇನೆ. ಇದರಲ್ಲೇನೂ ವಿಶೇಷವಿಲ್ಲ’ ಎಂದು ಹೇಳಿದರು.
‘ಅಲ್ಲದೇ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಹೀಗಾಗಿ, ರಾಜ್ಯಪಾಲರ ಬಳಿಗೆ ಹೋಗಿ ಚರ್ಚಿಸಿದ್ದೇನೆ. ಅದಕ್ಕೆ ಇಷ್ಟೊಂದು ಪ್ರಾಮುಖ್ಯ ನೀಡುವ ಅವಶ್ಯಕತೆ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.