ಬೆಂಗಳೂರು: ರಾಜ್ಯ ಬಜೆಟ್ನಲ್ಲಿ 7ನೇ ವೇತನ ಜಾರಿ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಯನ್ನು ಪ್ರಕಟಿಸದ ವಿರುದ್ಧ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ.ಅಮೃತ್ ರಾಜ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘2024-25ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರು, ಪಾಲಿಕೆ ನೌಕರರು ಮತ್ತು ಸ್ಥಳೀಯ ಸಂಸ್ಥೆ, ನಗರ ಸಭೆ/ಪುರಸಭೆ ನೌಕರರು 7ನೇ ವೇತನ ಜಾರಿ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಯ ಬಗ್ಗೆ ಬಹುನಿರೀಕ್ಷೆ ಇತ್ತು. ಆದರೆ ಅದನ್ನು ಹುಸಿಯಾಗಿದೆ’ ಎಂದರು.
‘ಈ ಕೂಡಲೇ 7ನೇ ವೇತನ ಜಾರಿ ಹಾಗೂ ಹಳೆ ಪಿಂಚಣಿ ಜಾರಿ ಮಾಡಬೇಕು. ಇಲ್ಲದಿದ್ದರೆ ಸಮಸ್ತ ಪಾಲಿಕೆ ನೌಕರರು ಮತ್ತು ಸ್ಥಳೀಯ ಸಂಸ್ಥೆ ನೌಕರರು ಮತ್ತು ನಗರಸಭೆ/ಪುರಸಭೆ ನೌಕರರು ಹೋರಾಟ ನಡೆಸಲಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.