ADVERTISEMENT

ಕನ್ನಡ ಧ್ವಜಾರೋಹಣ ಇಲ್ಲ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 13:06 IST
Last Updated 1 ನವೆಂಬರ್ 2019, 13:06 IST
ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಗೌರವವಂದನೆ ಸ್ವೀಕರಿಸಿದರು
ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಗೌರವವಂದನೆ ಸ್ವೀಕರಿಸಿದರು   

ಬೆಳಗಾವಿ: ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡ ಧ್ವಜಾರೋಹಣ ನೆರವೇರಲಿಲ್ಲ.

ರಾಷ್ಟ್ರ ಧ್ವಜಾರೋಹಣಕ್ಕಷ್ಟೇ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತವಾರಿ ಸಚಿವ ಜಗದೀಶ ಶೆಟ್ಟರ್‌ ಧ್ವಜಾರೋಹಣ ನೆರವೇರಿಸಿದರು. ಪಥಸಂಚಲನದ ನಂತರ, ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳಿಗೆ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಅದನ್ನು ಸಚಿವರಾದಿಯಾಗಿ ಯಾರೊಬ್ಬ ಜನಪ್ರತಿನಿಧಿಯಾಗಲೀ, ಅಧಿಕಾರಿಗಳಾಗಲೀ ವೀಕ್ಷಿಸಲಿಲ್ಲ. ಹೀಗಾಗಿ, ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಲಾಯಿತು.

ಈ ವರ್ಷವೂ, ಪೊಲೀಸ್ ಕವಾಯತಿನ ಆದೇಶಗಳನ್ನು ಕನ್ನಡದಲ್ಲೇ ನೀಡಿದ್ದು ಗಮನಸೆಳೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.