ADVERTISEMENT

ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಲ್ಲ; ಸಚಿವ ಸುಧಾಕರ್‌ಗೆ ಕುಮಾರಸ್ವಾಮಿ ತಿರುಗೇಟು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 9:40 IST
Last Updated 24 ಮಾರ್ಚ್ 2021, 9:40 IST
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ   

ಬೆಂಗಳೂರು: ಇಲ್ಲಿ ಯಾರೂ ಕೂಡ ಸತ್ಯಹರಿಶ್ಚಂದ್ರರಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಆರೋಗ್ಯ ಸಚಿವ ಸುಧಾಕರ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಭೂಮಿ ಮೇಲೆ ಹುಟ್ಟಿರುವ ಹಾಗೂಜೀವ ಇರುವ ಪ್ರತಿಯೊಂದು ಜೀವಿಗೂ ಸಹಜಪ್ರಕ್ರಿಯೆಗಳು ಇರುತ್ತವೆ. ಇವನ್ನುಅವರು ಅರ್ಥ ಮಾಡಿಕೊಳ್ಳಬೇಕು. ವಿನಾಕಾರಣ ನನ್ನ ಹೆಸರನ್ನು ಯಾಕೆ ಎಳೆದು ತರಬೇಕು? ಇಲ್ಲಿ ಎಲ್ಲರ ಮನೆದೋಸೆನೂ ತೂತು, ಯಾರೂಕೂಡ ಸತ್ಯಹರಿಶ್ಚಂದ್ರರಲ್ಲ ಎಂದು ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಈಗಾಗಲೇಸದನದ ಒಳಗೆ ನಾನು ಮಾಡಿರುವ ತಪ್ಪು ಒಪ್ಪಿಕೊಂಡಿರುವಾಗ ಮತ್ತೆ ನನ್ನ ಹೆಸರನ್ನು ಏಕೆ ಎಳೆದು ತರುತ್ತೀರಿ? ಇಂತಹ ವಿಚಾರಗಳನ್ನು ಚರ್ಚೆ ಮಾಡಿ ಯಾಕೆ ನಗೆಪಾಟಲಾಗುತ್ತೀರಾ? ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನೀವೇ ಸಮಸ್ಯೆ ತಂದು ಬೇರೆಯವರ ಮೇಲೆ ಕೆಸರು ಎರಚುವುದನ್ನು ಬಿಟ್ಟು ಜನರ ಸಮಸ್ಯೆಗಳನ್ನು ಬಗೆಹರಿಸುವುದರ ಕಡೆ ಗಮನ ಕೊಡಿ, ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ಸಮಯ ವ್ಯರ್ಥ ಮಾಡಬೇಡಿ ಎಂದು ಅವರು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.