ADVERTISEMENT

ಕಾನೂನು ಕೈಗೆತ್ತಿಕೊಂಡವರ ಬಿಡುವ ಮಾತೇ ಇಲ್ಲ: ಸಚಿವ ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 11:30 IST
Last Updated 17 ಏಪ್ರಿಲ್ 2022, 11:30 IST
ಸಚಿವ ಅಶ್ವತ್ಥನಾರಾಯಣ
ಸಚಿವ ಅಶ್ವತ್ಥನಾರಾಯಣ    

ಹೊಸಪೇಟೆ (ವಿಜಯನಗರ): ‘ಪೊಲೀಸ್‌ ಠಾಣೆಗೆ ನುಗ್ಗಿ ದಾಂಧಲೆ ಮಾಡಿ ಕಾನೂನು ಕೈಗೆತ್ತಿಕೊಂಡವರ ಬಿಡುವ ಮಾತೇ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

‘ಎಲ್ಲರೂ ಕಾನೂನು ಪಾಲಿಸಬೇಕು. ಕಾನೂನು ಹದಗೆಡಲು ಕಾರಣ ಆದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲರೂ ಶಾಂತಿ ಕಾಪಾಡಬೇಕು. ಹಲವು ಸಲ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇದಕ್ಕೆ ಕಾನೂನು ಉತ್ತರ ಕೊಡುತ್ತದೆ’ ಎಂದು ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದರು.

'ನಮ್ಮ ಭಾವನೆಗಳನ್ನು ಇತರರಿಗೆ ತಿಳಿಸುವ ರೀತಿಯಲ್ಲಿ ನಿಧಾನವಾಗಿ ತಿಳಿಸಬೇಕು. ಆದರೆ, ಕಾನೂನು ಕೈಗೆತ್ತಿಕೊಳ್ಳುವುದು ಎಷ್ಟರಮಟ್ಟಿಗೆ ಸರಿ?’ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.