ADVERTISEMENT

2 ತಿಂಗಳು ಉದ್ಘಾಟನಾ ಕಾರ್ಯಕ್ರಮಗಳಿಲ್ಲ: ಆರ್‌.ಅಶೋಕ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 21:37 IST
Last Updated 27 ಏಪ್ರಿಲ್ 2021, 21:37 IST
   

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ತಿಂಗಳು ಸರ್ಕಾರದ ವತಿಯಿಂದ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಂತಹ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೂನ್‌ ಕೊನೆಯವರೆಗೂ ಈ ರೀತಿಯ ಕಾರ್ಯಕ್ರಮಗಳು ನಡೆಯುವುದಿಲ್ಲ
ಎಂದರು.

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್‌ ರೋಗಿಗಳಿಗೆ ಲಭ್ಯವಿರುವ ಹಾಸಿಗೆಗಳ ವಿವರವನ್ನು ಸಾರ್ವಜನಿಕರ ಗಮನಕ್ಕೆ ಬರುವಂತೆ ಮಾಡಲು ಆನ್‌ಲೈನ್‌ನಲ್ಲಿ ಮಾಹಿತಿ ಹಾಕಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅಶೋಕ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.