ADVERTISEMENT

ಕಾಂಗ್ರೆಸ್ ಶಾಸಕ ಪಕ್ಷದ ಸಭೆಗೆ ಹೋಗುವುದಿಲ್ಲ: ಆನಂದ್ ಸಿಂಗ್ 

​ಪ್ರಜಾವಾಣಿ ವಾರ್ತೆ
Published 8 ಜುಲೈ 2019, 6:51 IST
Last Updated 8 ಜುಲೈ 2019, 6:51 IST
   

ಹೊಸಪೇಟೆ:‘ಜೆಡಿಎಸ್ ಮತ್ತು ಕಾಂಗ್ರೆಸ್ಶಾಸಕರು ರಾಜೀನಾಮೆ ಕೊಡುವ ವಿಚಾರ ಗೊತ್ತಿರಲಿಲ್ಲ’ ಎಂದು ಶಾಸಕ ಆನಂದ್‌ ಸಿಂಗ್ ಹೇಳಿದರು.‘ಜಿಂದಾಲ್‌ಗೆಜಮೀನು ಮಾರಾಟ ಮಾಡಬಾರದು. ವಿಜಯನಗರ ಜಿಲ್ಲೆ ಘೋಷಣೆ ಮಾಡಬೇಕು. ಈ ಎರಡೂ ಬೇಡಿಕೆಗಳು ಈಡೇರುವವರೆಗೆ ನಾನುರಾಜೀನಾಮೆ ಹಿಂಪಡೆಯುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀನಾಮೆ ಕುರಿತು ಸ್ಪೀಕರ್ ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ‌ ಉತ್ತರ ಕೊಡುವೆ.ರಾಜೀನಾಮೆ ಕೊಟ್ಟು ಮುಂಬೈಗೆ ಹೋಗುತ್ತಿರುವ ಶಾಸಕರ ಬಗ್ಗೆ ಪ್ರತಿಕ್ರಿಯಿಸಲಾರೆ’ ಎಂದರು.

‘ನಾನು ಬಿಜೆಪಿ ಸೇರುವುದರ ಬಗ್ಗೆ ಪ್ರತಿಕ್ರಿಯಿಸಲಾರೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ.ಸಿ.ಎಂ.ನನ್ನನ್ನು ಸಂಪರ್ಕಿಸಿರುವುದು ನಿಜ. ಅಮೆರಿಕದಿಂದಲೇ ಕರೆ ಮಾಡಿದ್ದರು. ನನ್ನ ಬೇಡಿಕೆ ಈಡೇರಿಸುವವರೆಗೆ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದೇನೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.