ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್ ಪೂರ್ವದಲ್ಲಿ ನಡೆಯುತ್ತಿದ್ದಂತೆ ನಡೆಸಲು ಅನುಮತಿ ನೀಡಲಾಗುವುದು, ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಈ ಸಂಬಂಧ ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಿದ್ದು ಅವರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳೆದ ಎರಡು ವರ್ಷ ಕೋವಿಡ್ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧ ಹೇರಲಾಗಿತ್ತು. ಆಗ ಸಾರ್ವಜನಿಕರ ಪ್ರಾಣ ಉಳಿಸುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ ರೀತಿಯ ಅಡೆತಡೆಗಳಿರುವುದಿಲ್ಲ. ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.