ಮೈಸೂರು: ‘ತಂದೆ ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಕೋಲಾರ ಸೇರಿದಂತೆ ಎಲ್ಲೂ ರಿಸ್ಕ್ ಇಲ್ಲ’ ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಅವರಿಗೆ ಹೈಕಮಾಂಡ್ ಏನು ಸೂಚನೆ ಕೊಟ್ಟಿದೆಯೋ ಗೊತ್ತಿಲ್ಲ. ಅವರು ಎಲ್ಲಿ ಸ್ಪರ್ಧಿಸಿದರೂ ಗೆಲ್ಲಿಸಲು ನಾವೆಲ್ಲರೂ ಪ್ರಯತ್ನಿಸುತ್ತೇವೆ. ವರುಣಾ ಕ್ಷೇತ್ರವನ್ನು ಬಿಟ್ಟುಕೊಡುವುದಕ್ಕೂ ಸಿದ್ಧವಿದ್ದೇನೆ. ಎಲ್ಲದಕ್ಕೂ ಮಿಗಿಲಾಗಿ ಅವರೇನು ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದು ಮುಖ್ಯವಾಗುತ್ತದೆ’ ಎಂದರು.
‘ವರುಣಾ, ಕೊಪ್ಪಳ, ಯಾದಗಿರಿ, ಚಾಮರಾಜಪೇಟೆ, ಕೋಲಾರ, ಚಿಕ್ಕನಾಯಕನಹಳ್ಳಿ, ಸವದತ್ತಿ–ಯಲ್ಲಮ್ಮ ಕ್ಷೇತ್ರದ ಜನರು ನಮ್ಮಲ್ಲಿ ಸ್ಪರ್ಧಿಸುವಂತೆ ಅವರನ್ನು ಕರೆದಿದ್ದಾರೆ. ಅವರು ಬಂದು ಗೆದ್ದರೆ ಬಾದಾಮಿಯಂತೆಯೇ ನಮ್ಮಲ್ಲೂ ಅಭಿವೃದ್ಧಿ ಆಗುತ್ತದೆ ಎನ್ನುವುದು ಜನರ ವಿಶ್ವಾಸ. ಹಾಗಾಗಿ ಕರೆಯುತ್ತಿದ್ದಾರೆ. ತಂದೆ ಯಾವುದೇ ಕ್ಷೇತ್ರ ಆಯ್ಕೆ ಮಾಡಿಕೊಂಡರೂ ಅದಕ್ಕೆ ಬದ್ಧರಾಗಿ ಕೆಲಸ ಮಾಡಲಿದ್ದೇವೆ’ ಎಂದು ತಿಳಿಸಿದರು.
‘ಅವರು ಕೋಲಾರದಲ್ಲಿ ಸ್ಪರ್ಧಿಸಿದರೆ ಗೆಲ್ಲುವುದು ಶತಸಿದ್ಧ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಎಲ್ಲೇ ಸ್ಪರ್ಧಿಸಿದರೂ ವಿರೋಧಿಗಳೆಲ್ಲರೂ ಒಟ್ಟಾಗಿಯೇ ಕೆಲಸ ಮಾಡುತ್ತಾರೆ. ಈಗಾಗಲೇ ಒಂದಾಗಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.