ಮಡಿಕೇರಿ: ‘ಶಾಲೆಗಳನ್ನು ಪುನರಾರಂಭಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಮಾರ್ಗಸೂಚಿ ಪ್ರಕಟಿಸಿದ್ದರೂ ರಾಜ್ಯದಲ್ಲಿ ಕೋವಿಡ್–19 ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಚಿಂತನೆ ರಾಜ್ಯ ಸರ್ಕಾರದ ಮುಂದೆ ಇಲ್ಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಲ್ಲಿ ಹೇಳಿದರು.
‘ಕೊರೊನಾದ ಮಧ್ಯಂತರ ಅವಧಿಯಲ್ಲಿ ರಾಜ್ಯವಿದೆ. ಎರಡು ತಿಂಗಳಿಂದ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶಾಲೆ ಆರಂಭಿಸುವ ಕುರಿತು ತಜ್ಞರ ಸಲಹೆ ಪಡೆಯಲಾಗಿದ್ದು, ಶಾಲೆ ಆರಂಭಿಸುವುದಕ್ಕೆ ಇದು ಸೂಕ್ತ ಸಮಯವಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ, ಇನ್ನೂ ಮೂರು ವಾರಗಳ ಕಾಲ ಪರಿಸ್ಥಿತಿ ಅವಲೋಕಿಸಲಾಗುವುದು. ಬಳಿಕ, ಪಕ್ಕದ ರಾಜ್ಯಗಳ ಪರಿಸ್ಥಿತಿ ಗಮನಿಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.