ADVERTISEMENT

ಜನಾಭಿಪ್ರಾಯಕ್ಕೆ ವಿರುದ್ಧ ಅರಣ್ಯ ಪ್ರದೇಶವೆಂದು ಘೋಷಿಸಲ್ಲ -ಮಾಧುಸ್ವಾಮಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 21:45 IST
Last Updated 21 ಫೆಬ್ರುವರಿ 2023, 21:45 IST
   

ಬೆಂಗಳೂರು: ‘ಸಾರ್ವಜನಿಕರ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವುದೇ ಪ್ರದೇಶವನ್ನು ಅರಣ್ಯ ಪ್ರದೇಶವೆಂದು ಘೋಷಿಸುವುದಿಲ್ಲ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿಯ ವಿರೂಪಾಕ್ಷಪ್ಪ ಮಾಡಾಳು, ‘ಚನ್ನಗಿರಿ ತಾಲ್ಲೂಕಿನ ಕುಕ್ಕುವಾಡದ ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶವನ್ನು ಜನರ ಅಭಿಪ್ರಾಯಕ್ಕೆ ವಿರುದ್ದವಾಗಿ ಅರಣ್ಯ ಪ್ರದೇಶವನ್ನಾಗಿ ಘೋಷಿಸಬಾರದು’ ಎಂದು ಒತ್ತಾಯಿಸಿದರು.

ಅದಕ್ಕೆ ಉತ್ತರಿಸಿದ ಸಚಿವರು, ‘ಈ ಪ್ರದೇಶವನ್ನು ಮೀಸಲು ವನ್ಯಜೀವಿ ಅರಣ್ಯ ಎಂದು ಘೋಷಿಸಲು ಸಾರ್ವಜನಿಕರ ವಿರೋಧವಿದ್ದರೆ, ಆ ಅಭಿಪ್ರಾಯಕ್ಕೆ ವಿರುದ್ಧವಾಗಿ ಸರ್ಕಾರ ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.