ADVERTISEMENT

ಜನತಾ ದರ್ಶನದಲ್ಲಿ ಸಲ್ಲಿಕೆಯಾಗಿರುವ 12,668 ಅರ್ಜಿಗಳ ತ್ವರಿತ ಇತ್ಯರ್ಥಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2023, 15:56 IST
Last Updated 28 ಸೆಪ್ಟೆಂಬರ್ 2023, 15:56 IST
   

ಬೆಂಗಳೂರು: ರಾಜ್ಯದ 29 ಜಿಲ್ಲೆಗಳಲ್ಲಿ ಸೆ.23ರಂದು ನಡೆದಿದ್ದ ಜನತಾ ದರ್ಶನದಲ್ಲಿ ಸಲ್ಲಿಕೆಯಾಗಿರುವ 12,668 ಅರ್ಜಿಗಳನ್ನು ಆಯಾ ಇಲಾಖೆಗಳು ತ್ವರಿತವಾಗಿ ಇತ್ಯರ್ಥ ಮಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ–ವಿಭಾಗ ಸೂಚಿಸಿದೆ.

‘ಗದಗ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆಸಲಾಗಿತ್ತು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 5,855, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ 1,574 ಹಾಗೂ ನಗರಾಭಿವೃದ್ಧಿ ಇಲಾಖೆಗೆ 1,192 ಅಹವಾಲುಗಳು ಸಲ್ಲಿಕೆಯಾಗಿದ್ದವು. ಜಿಲ್ಲಾವಾರು ಅಹವಾಲುಗಳಲ್ಲಿ ಹಾವೇರಿ ಜಿಲ್ಲೆಯ ಅರ್ಜಿಗಳು (1,937) ಅಧಿಕ ಸಂಖ್ಯೆಯಲ್ಲಿ ಸಲ್ಲಿಕೆಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT