ಬೆಂಗಳೂರು: ಅಂಬೇಡ್ಕರ್ ಹಾಗೂ ದಲಿತ ಸಮುದಾಯ ನಿಂದಿಸುವ ಸಂಭಾಷಣೆಯ ಕಿರು ನಾಟಕ ಪ್ರದರ್ಶನಕ್ಕೆ ಅವಕಾಶ ನೀಡಿದ್ದ ಆರೋಪದ ಮೇಲೆ ಮೌಂಟ್ ಕಾರ್ಮೆಲ್ ಕಾಲೇಜಿಗೆ (ಎಂಸಿಸಿ) ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಹಿಂದೆ ಜೈನ್ ಕಾಲೇಜಿನಲ್ಲಿ ವಿವಾದಾತ್ಮಕ ಕಿರು ನಾಟಕ ಪ್ರದರ್ಶಿಸಿದ್ದ ‘ದಿ ಡೆಲ್ರಾಯ್ಸ್ ಬಾಯ್ಸ್’ ಎಂಬ ತಂಡವೇ
ಮೌಂಟ್ ಕಾರ್ಮೆಲ್ ಕಾಲೇಜಿನ ಯುವಜನೋತ್ಸವದಲ್ಲೂ ಪ್ರದರ್ಶಿಸಿತ್ತು.
‘ಅಂಬೇಡ್ಕರ್ ಅವರ ವಿರುದ್ಧ ಬಳಸಲಾದ ಪದಗಳು ಆಕ್ಷೇಪಾರ್ಹವಾಗಿ ಒಂದು ವರ್ಗದ ಜನರಿಗೆ ನೋವುಂಟು ಮಾಡಿವೆ ಎಂಬ ಆರೋಪದ ಮೇಲೆ ಹಿಂದೆ ಜೈನ್ ವಿಶ್ವವಿದ್ಯಾಲಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈಗ ವಿವರಣೆ ಕೇಳಿ ಮೌಂಟ್ ಕಾರ್ಮೆಲ್ ಕಾಲೇಜಿಗೂ ನೋಟಿಸ್ ನೀಡಲಾಗಿದೆ. ಉತ್ತರ ಬಂದ ನಂತರ ಪ್ರಕರಣ ದಾಖಲಿಸಲಾಗುವುದು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.