ADVERTISEMENT

ನರೇಗಾ; ಕೇಂದ್ರದಿಂದ ಕರ್ನಾಟಕಕ್ಕೆ ₹622 ಕೋಟಿ ಬಾಕಿ: ಶಿವರಾಜ ಸಿಂಗ್ ಚೌಹಾಣ್‌

ಪಿಟಿಐ
Published 2 ಡಿಸೆಂಬರ್ 2025, 13:27 IST
Last Updated 2 ಡಿಸೆಂಬರ್ 2025, 13:27 IST
   

ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಕರ್ನಾಟಕಕ್ಕೆ ₹622 ಕೋಟಿ ಬಿಡುಗಡೆ ಮಾಡದೆ ಬಾಕಿ ಇರಿಸಿಕೊಂಡಿದೆ. 

ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ ಸಿಂಗ್ ಚೌಹಾಣ್‌ ಈ ಬಗ್ಗೆ ಉತ್ತರ ನೀಡಿದ್ದಾರೆ. ರಾಜ್ಯಕ್ಕೆ ಕೂಲಿ ಮೊತ್ತ ₹8.94 ಕೋಟಿ, ಸಾಮಗ್ರಿ ವೆಚ್ಚ ₹576 ಕೋಟಿ ಹಾಗೂ ಆಡಳಿತಾತ್ಮಕ ₹37 ಕೋಟಿ ಬಿಡುಗಡೆ ಮಾಡಬೇಕಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ
ನವದೆಹಲಿ: ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಘೋಷಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ರಾಜ್ಯ ಸಚಿವ ಜಿತಿನ್‌ ಪ್ರಸಾದ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಬ್ರಿಜೇಶ್‌ ಚೌಟ ಮಂಗಳವಾರ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿ, ಸಮುದ್ರ ಆಹಾರಗಳು ಗೋಡಂಬಿಯನ್ನು ಸಂಭಾವ್ಯ ರಫ್ತು ಉತ್ಪನ್ನಗಳಾಗಿ ಸೇರಿಸಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT