ADVERTISEMENT

ದಿಲೀಪ್‌ ಕುಮಾರ್‌ಗೆ ಶ್ರೀನಗರೀಂದ್ರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2023, 23:30 IST
Last Updated 8 ನವೆಂಬರ್ 2023, 23:30 IST
ಡಾ.ಟಿ.ದಿಲೀಪ್‌ ಕುಮಾರ್‌
ಡಾ.ಟಿ.ದಿಲೀಪ್‌ ಕುಮಾರ್‌   

ಚಿತ್ರದುರ್ಗ: ನರ್ಸಿಂಗ್‌ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗೆ ಮೀಸಲಿರುವ ‘ಶ್ರೀನಗರೀಂದ್ರ ಅಂತರರಾಷ್ಟ್ರೀಯ ಪುರಸ್ಕಾರ’ಕ್ಕೆ ಇಂಡಿಯನ್‌ ನರ್ಸಿಂಗ್‌ ಕೌನ್ಸಿಲ್‌ ಅಧ್ಯಕ್ಷ ಡಾ.ಟಿ.ದಿಲೀಪ್‌ಕುಮಾರ್‌ ಭಾಜನರಾಗಿದ್ದಾರೆ.

ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ರಾಣಿ ಮಹಾ ಚಕ್ರಿ ಸಿರಿಂದೋರ್ನ್‌ ಅವರು 2023ನೇ ಸಾಲಿನ ಪುರಸ್ಕಾರವನ್ನು ದಿಲೀಪ್‌ಕುಮಾರ್‌ ಅವರಿಗೆ ಪ್ರದಾನ ಮಾಡಿದರು.

ದಿಲೀಪ್‌ಕುಮಾರ್‌ ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದವರು. ನರ್ಸಿಂಗ್‌ ಶಿಕ್ಷಣ ಪಡೆದ ಇವರು ಚಿತ್ರದುರ್ಗ, ಬೆಂಗಳೂರು, ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಸೇವೆ ಸಲ್ಲಿಸಿದ್ದಾರೆ. ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ನರ್ಸಿಂಗ್‌ ಉಪ ಸಲಹಾಗಾರರಾಗಿ ದೆಹಲಿಯಲ್ಲಿ ಸೇವೆಗೆ ಸೇರಿದರು. ಕೆಲ ವರ್ಷಗಳಿಂದ ಇಂಡಿಯನ್‌ ನರ್ಸಿಂಗ್ ಕೌನ್ಸಿಲ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.