ADVERTISEMENT

18ರಂದು ಪ್ರಧಾನಿ ಮೋದಿ ಭಾಷಣಕ್ಕೆಅವಕಾಶ ನೀಡಬಾರದೆಂದು ಮನವಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 20:16 IST
Last Updated 8 ಏಪ್ರಿಲ್ 2019, 20:16 IST

ಬೆಂಗಳೂರು: ‘ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇದೇ 18ರಂದು ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಭಾಷಣಕ್ಕೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ವಕ್ತಾರ ಎಚ್‌.ಎ. ವೆಂಕಟೇಶ್‌ ಅವರು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

‘ರಾಜ್ಯದಲ್ಲಿ ಮೊದಲ ಹಂತದಲ್ಲಿ ಲೋಕಸಭೆಯ 14 ಕ್ಷೇತ್ರಗಳಿಗೆ ಅದೇ ದಿನ ಚುನಾವಣೆ ನಡೆಯಲಿದೆ. ಚಿಕ್ಕೋಡಿ ಕ್ಷೇತ್ರದ ಅಕ್ಕಪಕ್ಕದ ಕ್ಷೇತ್ರಗಳಲ್ಲೂ ಚುನಾವಣೆ ನಡೆಯಲಿರುವುದರಿಂದ ಮೋದಿ ಭಾಷಣ ಮತದಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ನೀತಿ ಸಂಹಿತೆ ಉಲ್ಲಂಘನೆ ಮತ್ತು ಚುನಾವಣಾ ಪಾವಿತ್ರ್ಯ ಕಾಯ್ದುಕೊಳ್ಳುವ ಕಾರಣದಿಂದಲೂ ಅವಕಾಶ ನೀಡಬಾರದು’ ಎಂದೂ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT