ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ. 3ರಿಂದ 26ರವರೆಗೆ ನಿಗದಿಪಡಿಸಿದ್ದ ಮಧ್ಯಂತರ ರಜೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ರದ್ದುಪಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಇಲಾಖೆಯ ನಿರ್ದೇಶಕರು (ಪ್ರೌಢ ಶಿಕ್ಷಣ), ‘2020–21ನೇ ಸಾಲಿನ ಶೈಕ್ಷಣಿಕ ಅವಧಿ ಮತ್ತು ಮಧ್ಯಂತರ ರಜೆ ನಿಗದಿಪಡಿಸಿ ಇದೇ ಫೆ. 14ರಂದು ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ’ ಎಂದಿದ್ದಾರೆ.
‘ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಯ ಕುರಿತು ಇಲಾಖೆಯಿಂದ ವಿವಿಧ ಹಂತಗಳಲ್ಲಿ ಜಾರಿಗೊಳಿಸುವ ಆದೇಶಗಳಂತೆ ಶಿಕ್ಷಕರು ಕಾರ್ಯನಿರ್ವಹಿಸಬೇಕು. ವಿದ್ಯಾಗಮ ಕಲಿಕಾ ಕಾರ್ಯಕ್ರಮವನ್ನು ಮುಂದಿನ ಆದೇಶದವರೆಗೆ ಯಥಾವತ್ ಅನುಷ್ಠಾನಗೊಳಿಸಬೇಕು’ ಎಂದೂ ಅವರು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.