ಮೈಸೂರು: ಪ್ರಭಾವಿ ಮಠದಿಂದ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಇಲ್ಲಿನ ಒಡನಾಡಿ ಸಂಸ್ಥೆ ಒತ್ತಾಯಿಸಿದೆ.
ಈ ಬಗ್ಗೆ 'ಪ್ರಜಾವಾಣಿ' ಜೊತೆ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ಸ್ಟ್ಯಾನ್ಲಿ ಮತ್ತು ಪರಶು, ‘ಸ್ವಾಮೀಜಿ ವಿರುದ್ಧ ಈಗಾಗಲೇ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಕಾರಣದಿಂದ ನ್ಯಾಯಾಂಗ ತನಿಖೆಗೆ ಒಳಪಡಬೇಕು. ನಾಯಿ ಸತ್ತಾಗ ಕಣ್ಣೀರಿಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಣ್ಮಕ್ಕಳ ಕಣ್ಣೀರಿಗೆ ಧ್ವನಿಯಾಗಿ, ನ್ಯಾಯ ಕೊಡಿಸಬೇಕು’ ಎಂದು ಒತ್ತಾಯಿಸಿದರು.
ಬೆದರಿಕೆ ಕರೆ: ಸಂತ್ರಸ್ತ ಬಾಲಕಿಯರು ಒಡನಾಡಿಯ ಸಂಪರ್ಕಕ್ಕೆ ಬರುತ್ತಿದ್ದಂತೆಯೇ, ಸಂಸ್ಥೆಯ ಸಿಬ್ಬಂದಿಯ ಮೇಲೆ ನಿರಂತರ ಒತ್ತಡ, ಬೆದರಿಕೆ ಕರೆಗಳು ಬಂದಿವೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.