ಬೆಂಗಳೂರು: ರಾಜ್ಯದಲ್ಲಿ ಓಮೈಕ್ರಾನ್ನ 5 ಹೊಸ ಪ್ರಕರಣಗಳು ಬುಧವಾರ ಪತ್ತೆಯಾಗಿದ್ದು, ಒಟ್ಟು ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 4 ಹಾಗೂ ದಾವಣಗೆರೆಯಲ್ಲಿ ಒಂದು ಪ್ರಕರಣ ಹೊಸದಾಗಿ ದೃಢಪಟ್ಟಿದೆ. ಈ ಬೆನ್ನಲ್ಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆ ಕಂಡಿದ್ದು, ಒಂದೇ ದಿನ566 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಎರಡೂವರೆ ತಿಂಗಳ ಅವಧಿಯಲ್ಲಿ ದಿನವೊಂದಕ್ಕೆ ದೃಢಪಟ್ಟ ಗರಿಷ್ಠ ಪ್ರಕರಣಗಳು ಇವಾಗಿವೆ.ರಾಜ್ಯದ 22 ಜಿಲ್ಲೆಗಳಲ್ಲಿಕೋವಿಡ್ ಪ್ರಕರಣಗಳು ಹೊಸದಾಗಿಪತ್ತೆಯಾಗಿವೆ.ಒಂದು ದಿನದ ಅವಧಿಯಲ್ಲಿ 1.08 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.52ರಷ್ಟಿದೆ. ಐದು ಜಿಲ್ಲೆಗಳಲ್ಲಿಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 16ಜಿಲ್ಲೆಗಳಲ್ಲಿಒಂದಂಕಿಯಲ್ಲಿದೆ. ಯಾದಗಿರಿ, ಬಾಗಲಕೋಟೆ ಸೇರಿದಂತೆ 8ಜಿಲ್ಲೆಗಳಲ್ಲಿಹೊಸ ಪ್ರಕರಣಗಳು ವರದಿಯಾಗಿಲ್ಲ.
ಬೆಂಗಳೂರು ನಗರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, 400 ಮಂದಿಕೋವಿಡ್ಪೀಡಿತರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 33, ಹಾಸನದಲ್ಲಿ 31, ಉಡುಪಿಯಲ್ಲಿ 17, ಕೊಡಗು ಹಾಗೂ ಕೋಲಾರದಲ್ಲಿ ತಲಾ 14ಪ್ರಕರಣಗಳುವರದಿಯಾಗಿವೆ.ಉಳಿದಜಿಲ್ಲೆಗಳಲ್ಲಿಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.05 ಲಕ್ಷ ದಾಟಿದೆ.
ಸೋಂಕಿತರಲ್ಲಿ 245 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.59 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,771ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ 6,388 ಸೋಂಕಿತರಿದ್ದಾರೆ. ಹಾವೇರಿ, ಯಾದಗಿರಿ ಹಾಗೂ ಗದಗ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಬೀದರ್, ಬಾಗಲಕೋಟೆ ಸೇರಿದಂತೆ ಐದು ಜಿಲ್ಲೆಗಳಲ್ಲಿಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.
ಕೋವಿಡ್ಪೀಡಿತರಲ್ಲಿ ಬೆಂಗಳೂರು ನಗರದಲ್ಲಿ ನಾಲ್ವರು, ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 1.06 ರಷ್ಟು ಇದೆ. ಈವರೆಗೆಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,324ಕ್ಕೆ ಏರಿಕೆಯಾಗಿದೆ.
ಐಎಲ್ಐ ಮತ್ತು ಸಾರಿ ಪ್ರಕರಣಗಳ ಮನೆ ಮನೆ ಸಮೀಕ್ಷೆ 2022ರ ಜ.15ರವರೆಗೆ ರಾಜ್ಯದಲ್ಲಿ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.