ADVERTISEMENT

ತನ್ವೀರ್ ಸೇಠ್ ಕೊಲೆಗೆ ಸಂಘಟನೆ ಸಂಚು: ಐದು ಮಂದಿ ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2019, 7:25 IST
Last Updated 18 ನವೆಂಬರ್ 2019, 7:25 IST
ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ ಆರೋಪಿ ಫರ್ಹಾನ್ ಪಾಷಾ
ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ ಆರೋಪಿ ಫರ್ಹಾನ್ ಪಾಷಾ   

ಮೈಸೂರು: ಶಾಸಕ ತನ್ವೀರ್ ಸೇಠ್ ಅವರನ್ನು ಕೊಲ್ಲಲೆಂದೇ ಆರೋಪಿ ಪರ್ಹಾನ್ ಪಾಷಾ ಹಲ್ಲೆ ನಡೆಸಿರುವುದು ತನಿಖೆ ವೇಳೆ ಗೊತ್ತಾಗಿದೆ.

'ಕೆಲಸ ಕೇಳಲು ಹಾಗೂ ಇತರ ಸಹಾಯ ಕೇಳಲು ಹೋಗಿದ್ದಾಗ ನನ್ನನ್ನು ಸರಿಯಾಗಿ ಉಪಚರಿಸಲಿಲ್ಲ. ಇಂತಹ ಜನಪ್ರತಿನಿಧಿ ಇರುವುದು ಬೇಡ ಎಂದು ಹಲ್ಲೆ ನಡೆಸಿದೆ. ಇದಕ್ಕೂ ಮುನ್ನ ಮೂರು ಬಾರಿ ಯತ್ನಿಸಿ ವಿಫಲನಾಗಿದ್ದೆ' ಎಂದು ಆರೋಪಿ ಹೇಳಿಕೆ ನೀಡಿದ್ದಾ‌ನೆ ಎನ್ನಲಾಗಿದೆ.

ಆದರೆ, ಈತನ ಹಿಂದೆ ಸಂಘಟನೆಯೊಂದರ ಪಾತ್ರ ಇದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.'ಸಂಘಟನೆಯೊಂದು ವ್ಯವಸ್ಥಿತವಾಗಿ ಯೋಜನೆಹೆಣೆದು ಈ ಕೃತ್ಯ ಎಸಗಿದೆ. ಈವರೆಗೆ 5 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ' ಎಂದು ಹೆಸರು ಹೇಳಲಿಚ್ಛಿಸದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಪ್ರಜಾವಾಣಿಗೆ ತಿಳಿಸಿದ್ದಾರೆ. ಜತೆಗೆ ಇನ್ನಷ್ಟು ಮಂದಿಯ ಶೋಧಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.