ADVERTISEMENT

ಮುಂದುವರಿದ ಆಪರೇಷನ್‌ ಕಮಲ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 20:15 IST
Last Updated 16 ಫೆಬ್ರುವರಿ 2019, 20:15 IST

ಚಾಮರಾಜನಗರ: ‘ಆಪರೇಷನ್‌ ಕಮಲ ವಿ‌ಫಲವಾಗಿ ಬಹಳ ದಿನ ಆಗಿದ್ದರೂ, ಬಿಜೆಪಿಯವರು ಅದನ್ನು ಮುಂದುವರಿಸಿದ್ದಾರೆ. ಅವರಿಗೆ ಮಾನ ಮರ್ಯಾದೆ ಎಂಬುದೇ ಇಲ್ಲ’ ಎಂದು ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಲ್ಲಿ ಶನಿವಾರ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್‌ನಲ್ಲಿ ಅತೃಪ್ತರು ಯಾರೂ ಇಲ್ಲ. ನಾಲ್ವರು ಶಾಸಕರು ಅತೃಪ್ತರು ಎಂದಲ್ಲ. ಅವರು ಶಾಸಕಾಂಗ ಪಕ್ಷದ ಸಭೆಗೆ ಬಂದಿರಲಿಲ್ಲ. ಹೀಗಾಗಿ ಅನರ್ಹಗೊಳಿಸುವಂತೆ ವಿಧಾನ ಸಭಾಧ್ಯಕ್ಷರಿಗೆ ಮನವಿ ಕೊಟ್ಟಿದ್ದೆವು. ಈಗ ಅವರು ನಮ್ಮನ್ನು ಭೇಟಿಯಾಗಿದ್ದಾರೆ. ನಾವು ಕೊಟ್ಟಿರುವ ಮನವಿಯ ಬಗ್ಗೆಸಭಾಧ್ಯಕ್ಷರು ಇನ್ನೂ ನಿರ್ಧಾರ ಕೈಗೊಂಡಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT