ಬೆಂಗಳೂರು: ‘ಕೋವಿಡ್ನಿಂದ ಮೃತಪಟ್ಟ ವ್ಯಕ್ತಿ ಬಿಪಿಎಲ್ ಕುಟುಂಬದವರಾಗಿದ್ದರೆ, ಆ ಕುಟುಂಬಕ್ಕೆ ಮುಖ್ಯಮಂತ್ರಿ ₹ 1 ಲಕ್ಷ ಪರಿಹಾರ ಘೋಷಿಸಿದ್ದಾರೆ. ಆ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೆ ಒಳಪಡಿಸಿ ₹ 5 ಲಕ್ಷಕ್ಕೆ ಹೆಚ್ಚಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ವಿಪತ್ತು ಪರಿಹಾರದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಕೊಡಲು ಅವಕಾಶವಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.