ADVERTISEMENT

'ಭೂ ಒಡೆತನ ಯೋಜನೆ': ಅಕ್ರಮಗಳ ಕುರಿತು ತನಿಖೆಗೆ ಸಿ. ಮುನಿಕೃಷ್ಣ ಆದೇಶ

'ಪ್ರಜಾವಾಣಿ'ಯಲ್ಲಿ ಪ್ರಕಟವಾದ ಒಳನೋಟಕ್ಕೆ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2020, 8:03 IST
Last Updated 21 ಡಿಸೆಂಬರ್ 2020, 8:03 IST
ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದ ವರದಿ
ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದ ವರದಿ   

ಬೆಂಗಳೂರು: ಭೂ ಒಡೆತನ ಯೋಜನೆಯ ಅನುಷ್ಠಾನದಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆಗೆ ಆದೇಶಿಸಲಾಗುವುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ‌ ಅಧ್ಯಕ್ಷ ಸಿ. ಮುನಿಕೃಷ್ಣ ತಿಳಿಸಿದ್ದಾರೆ.

ಭೂ ಒಡೆತನ ಯೋಜನೆಯಲ್ಲಿ ಅಕ್ರಮ ನಡೆಯುತ್ತಿರುವ‌ ಕುರಿತು 'ಚೋಮನ ಕನಸು: ಚೋರರ ನನಸು' ಎಂಬ ಶೀರ್ಷಿಕೆಯಡಿ 'ಪ್ರಜಾವಾಣಿ'ಯ ಭಾನುವಾರದ ಸಂಚಿಕೆಯಲ್ಲಿ ‌ಪ್ರಕಟವಾಗಿದ್ದ ವರದಿಗೆ ಪ್ರತಿಕ್ರಿಯಿಸಿರುವ ಅವರು, ಬೆಳಗಾವಿ, ರಾಯಚೂರು ಸೇರಿದಂತೆ ನಿರ್ದಿಷ್ಟ ಪ್ರಕರಣಗಳ ಬಗ್ಗೆ ತನಿಖೆ‌ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಯಡಿ ಈವರೆಗೆ 41,297 ಕುಟುಂಬಗಳಿಗೆ 14,136 ಎಕರೆ 18 ಗುಂಟೆ ನೀರಾವರಿ ಜಮೀನು ಮತ್ತು 5,388 ಎಕರೆ 37 ಗುಂಟೆ ಖುಷ್ಕಿ ಜಮೀನು ಹಂಚಿಕೆ‌ ಮಾಡಲಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಇರುವ ಲೋಪಗಳನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ADVERTISEMENT

ಭೂ ಒಡೆತನ ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ತರಲಾಗುವುದು. ನಿಗಮದ‌ ಮೇಲುಸ್ತುವಾರಿಯಲ್ಲಿ ಆಯಾ ಜಿಲ್ಲಾಧಿಕಾರಿಗಳ‌ ನೇತೃತ್ವದಲ್ಲಿ ‌ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.