ಮಂಗಳೂರು: ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರು ಯೇನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಗತ್ಯವಾಗಿ ಆತಂಕ ಸೃಷ್ಟಿಸುವ ಸುಳ್ಳು ಸುದ್ದಿ ಹರಡಬಾರದು. ಅವರ ಆರೋಗ್ಯ ಚೇತರಿಕೆಗೆ ಎಲ್ಲರೂ ಪ್ರಾರ್ಥಿಸಬೇಕು ಎಂದು ಅವರ ಕುಟುಂಬಸ್ಥರು ವಿನಂತಿಸಿಕೊಂಡಿದ್ದಾರೆ.
‘ನಾನು ಅವರ ಕುಟುಂಬಸ್ಥರೊಡನೆ ನಿಕಟ ಸಂಪರ್ಕದಲ್ಲಿದ್ದೇನೆ. ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯು ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸುಳ್ಳು ಸುದ್ದಿಯನ್ನು ನಂಬಬಾರದು. ಓಸ್ವಾಡ್ ಫರ್ನಾಂಡಿಸ್ ಎಂಬ ವ್ಯಕ್ತಿ ನಿಧನರಾಗಿರುವ ಸಂಬಂಧ ಬಂದಿದ್ದ ಜಾಹೀರಾತೊಂದನ್ನು ಕೆಲವು ತಪ್ಪಾಗಿ ಅರ್ಥೈಸಿಕೊಂಡು ಸುಳ್ಳು ಸುದ್ದಿ ಹರಡಿದ್ದರು’ ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.